ಸಿನಿ ಇಂಡಸ್ಟ್ರಿಯಲ್ಲಿಯೇ ಸೂಪರ್ ಸ್ಟಾರ್ ಎಂದು ಕರೆಸಿಕೊಳ್ಳುವ ರಜನಿಕಾಂತ್, ನಾ ದಾರಿ ರಹದಾರಿ(ನನ್ನ ದಾರಿ ರಹದಾರಿ) ಎನ್ನುತ್ತಾ ಇದೀಗ ಸಿನಿಮಾದಿಂದ ಸಂಪಾದಿಸಿದ ಹಣದಲ್ಲಿ ಕೆಲವರಿಗೆ ಉಚಿತವಾಗಿ ಮನೆಗಳನ್ನು ಹಂಚುತ್ತಿದ್ದಾರೆ. ಅತಿ ಹೆಚ್ಚು ಆಸೆ ಪಡುವ ಪುರುಷ, ಅತಿ ಹೆಚ್ಚು ಆವೇಶ ಪಡುವ ಮಹಿಳೆ ಉದ್ಧಾರವಾಗಿರುವುದು ಚರಿತ್ರೆಯಲ್ಲೇ ಇಲ್ಲ ಎಂದು ಡೈಲಾಗ್ ಹೊಡೆಯುತ್ತಾ, ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಪಾರ ಅಭಿಮಾನಿ ಬಳಗವನ್ನೇ ಹೊಂದಿರುವ ರೋಬೋ ರಜನಿ ಇದೀಗ ಮನೆಗಳನ್ನು ಹಂಚುತ್ತಿದ್ದಾರೆ. 


ಅರೇ ಏನಪ್ಪಾ ಇದು, ರಜನಿಕಾಂತ್ ಯಾಕೆ ಇದೆಲ್ಲಾ ಮಾಡ್ತೀದಾರೆ ಅಂತ ಆಶರ್ಯವಾಯ್ತಾ! ಉತ್ತರ ನಾವ್ ಹೇಳ್ತೀವಿ ನೋಡಿ. ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯ ಹಸ್ತವನ್ನು ಚಾಚಿದ್ದಾರೆ. ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ನಿಂದ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್ ಅವರು ನೆರೆ ಸಂತ್ರಸ್ತರಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ರಜನಿಕಾಂತ್ ಅವರು ಇಂದು ತಮ್ಮ ಕಚೇರಿಯಲ್ಲಿ ನೆರೆ ಸಂತ್ರಸ್ತರಿಗೆ ಮನೆಯ ಹಕ್ಕು ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ರಜನಿಕಾಂತ್ ಸಂತ್ರಸ್ತರಿಗೆ ಮನೆಯ ಪತ್ರಗಳನ್ನು ನೀಡುತ್ತಿರುವ ಫೋಟೋಗಳನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ರಜನಿಕಾಂತ್ ಅವರ ಈ ಕೆಲಸ ನೋಡಿ ಅಭಿಮಾನಿಗಳು ತಮ್ಮ ನೆಚ್ಚಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.


ಇತ್ತೀಚೆಗೆ ತಮ್ಮನ್ನು ಹೀರೋ ಮಾಡಿದ ನಿರ್ಮಾಪಕರಿಗೆ ಒಂದು ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ನೀಡಿದ್ದರು. ರಜನಿಕಾಂತ್ ಮೊದಲ ಬಾರಿಗೆ 1978ರಲ್ಲಿ `ಭೈರವಿ’ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಂಡಿದ್ದರು. ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿದರೂ ಕಲೈಜ್ಞಾನಂ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ಹಾಗಾಗಿ ರಜನಿಕಾಂತ್ ನಿರ್ಮಾಪಕರಿಗೆ ಮನೆಯನ್ನು ಗಿಫ್ಟ್ ಆಗಿ ನೀಡಿ ಗುರು ಗೌರವ ನೀಡಿದ್ದರು.




మరింత సమాచారం తెలుసుకోండి: