ಕಳೆದ ಭಾನುವಾರ ಮೋದಿಯವರು ಕರೆ ನೀಡಿದ್ದ ಜನತಾ ಕಪ್ಯೂನಂತರ ದೇಶದ ಸಾಕಷ್ಟು ಸೆಲಬ್ರೆಟಿಗಳು ಹಾಗೂ ಸಿನಿಮಾ ತಾರೆಗಳು ಕರೋನಾ ವೈರಸ್ ಕುರಿತು ಸಾಕಷ್ಟು ಜಾಗೃತಿಯನ್ನು ತಮ್ಮ ಅಭಿಮಾನಿಗಳಲ್ಲಿ ಮೂಡಿಸಿದ್ದರು.  ಅದೇ ರೀತಿ ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರೋನೊ ವೈರಸ್ ಕುರಿತು ಚಾಲೆಂಜಿಂಗ್ ಸ್ಟಾರ್ ಯಾವ ರೀತಿ ಜಾಗೃತಿ ಮೂಡಿಸಿದ್ದಾರೆ ಗೊತ್ತಾ?  ಈ ಕುರಿತು ಮತ್ತಷ್ಟು ಮಾಹಿತಿ ಇಲ್ಲಿದೆ‌ ನೋಡಿ.

 

 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಮನವಿ ಮಾಡಿಕೊಂಡಿದ್ದಾರೆ.

 

 

ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿ ಸುರಕ್ಷಿತವಾಗಿರಿ. ಈ ಸೋಂಕು ರೋಗ ಬಹಳ ಅಪಾಯಕಾರಿ ಎಂಬುದು ನಿಮಗೆ ತಿಳಿದರೂ ಸಹ ತಮ್ಮ ಊರುಗಳಿಗೆ ಹೋಗುವುದು, ಹಬ್ಬಕ್ಕಾಗಿ ಸಂಚರಿಸುವುದು ಮಾಡದಿರಿ. ನಿಮ್ಮ ಈ ಕೃತ್ಯದಿಂದ ಇಡೀ ದೇಶವೇ ಮಾರಣಹೋಮಕ್ಕೆ ತುತ್ತಾಗುವಂತೆ ಮಾಡದಿರಿ. ಇಟಲಿ ಸ್ಪೇನ್ ದೇಶಗಳಲ್ಲಿ ಜಾಗೃತಕ್ರಮಗಳನ್ನು ಮೊದಲೇ ಸರಿಯಾಗಿ ಪಾಲಿಸದೆ ಆಗುತ್ತಿರುವ ಅನಾಹುತಗಳು ನಿಮ್ಮ ಕಣ್ಣ ಮುಂದಿವೆ. ನಿಮ್ಮ ಕರ್ತವ್ಯ ಮನೆಯಲ್ಲಿಯೇ ಇದ್ದು ದೇಶದ ಹಿತಕ್ಕಾಗಿ ಎಲ್ಲಾ ನಿಯಮಗಳನ್ನು ಪಾಲಿಸುವುದು. ಇದನ್ನು ದಯಮಾಡಿ ನೆರವೇರಿಸಿಕೊಡಿ. 'Common sense is not common' ಎನ್ನುವ ಹಾಗೆ ಮಾಡಬೇಡಿ. ಎಂದು ದರ್ಶನ್ ಮನವಿಯನ್ನು ಮಾಡಿದ್ದಾರೆ. 

 

 

 

ಈ  ಬಗ್ಗೆ ದೇಶದ ನಾಗರೀಕರು ಸರ್ಕಾರ ಹೊರಡಿಸಿರುವ ಆದೇಶವನ್ನು ಯಾರೂ ಕೂಡ ಮೀರದೆ ಮನೆಯಲ್ಲೇ ಇದ್ದು ದೇಶ ಸುರಕ್ಷಿತವಾಗಿರುವಂತೆ ಮಾಡಬೇಕು ಹಾಗೂ ಕರೋನಾ ವೈರಸ್ ಬಗ್ಗೆ ಹೆಚ್ಚಿನ ಜಾಗೃತಿ ಜನರಲ್ಲಿ ಮೂಡಬೇಕು ಎಂಬುದು ಸೆಲಬ್ರೆಟಿಗಳು ಸೇರಿ ಎಲ್ಲಾ ನಾಗರೀಕರ ಆಶಯವಾಗಿದೆ.

మరింత సమాచారం తెలుసుకోండి: