ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಗೆ ಇ. ಡಿ ಸಂಕಟ ಮುಗಿಯಿತು ಎನ್ನುವುದರೊಳಗೆ ಇದೀಗ ಕಾಂಗ್ರೆಸ್ ನ ಮತ್ತೋರ್ವ ಪ್ರಮುಖ ನಾಯಕನ ಟಾರ್ಗೆಟ್ ಆದಂತಿದೆ. ಅದು ಬೇರಾರು ಅಲ್ಲ, ಮಾಜಿ ಸಚಿವ ಕೆ. ಜೆ ಜಾರ್ಜ್ಗೆ ಇಡಿ ಕಂಟಕ ಕಾಡಲಾರಂಭಿಸಿದೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಅವರು ನೀಡಿದ್ದ ದೂರು ಆಧರಿಸಿ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸುವ ಸೂಚನೆ ನೀಡಿದೆ.


ಕಾಂಗ್ರೆಸ್ ನ ಪ್ರಮುಖ ನಾಯಕ ಕೆ.ಜೆ.ಜಾರ್ಜ್ ಅವರು ಬೇನಾಮಿ ಹೆಸರಿನಲ್ಲಿ ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಆಸ್ಟ್ರೇಲಿಯಾ, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಲ್ಲಿ ಜಾರ್ಜ್ ಅವರ ಹೂಡಿಕೆ ಇದೆ. ಚುನಾವಣಾ ಆಯೋಗ ಮತ್ತು ಲೋಕಾಯುಕ್ತಕ್ಕೆ ಸಲ್ಲಿಸಿರುವ ಮಾಹಿತಿಯಲ್ಲಿ ತಮ್ಮ ವಿದೇಶಿ ಹೂಡಿಕೆಯನ್ನು ಜಾರ್ಜ್ ಮುಚ್ಚಿಟ್ಟಿದ್ದಾರೆ ಎಂದು ರವಿಕೃಷ್ಣಾರೆಡ್ಡಿ ದೂರಿನಲ್ಲಿ ಆರೋಪಿಸಿರುವುದಲ್ಲದೆ, ಅದಕ್ಕೆ ಅಗತ್ಯವಾದ ದಾಖಲೆಗಳನ್ನೂ ಕೂಡ ಸಲ್ಲಿಸಿದ್ದರು.ಜಾರ್ಜ್ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ 1999ರಡಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿತ್ತು. ಈ ಬಗ್ಗೆ ಎರಡು ತಿಂಗಳಾದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನಿನ್ನೆ ದೂರು ನೀಡಲಾಗಿದೆ.ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯ ಜಾರ್ಜ್ ಅವರ ವಿಚಾರಣೆಗೆ ಮುಂದಾಗಿದೆ ಎಂದು ಹೇಳಲಾಗಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ, ಕಾಂಗ್ರೆಸ್‍ನ ಮತ್ತೊಬ್ಬ ನಾಯಕನಿಗೆ ಇಡಿ ಕಂಟಕ ಎದುರಾಗುವ ಸಾಧ್ಯತೆಗಳು ನೇರವಾಗಿ ಗೋಚರವಾಗುತ್ತಿವೆ. 


ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿರುವ ಜಾರ್ಜ್ ಹೈಕಮಾಂಡ್‍ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಬಹುತೇಕ ನಾಯಕರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈಗ ಖಾಸಗಿ ದೂರು ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿರುವುದು ಕುತೂಹಲ ಕೆರಳಿಸಿದೆ. ಇದರ ಹಿಂದೆಯೂ ಸಹ ಕೇಂದ್ರದ ಕೈವಾಡ ಇದೆಯಾ ಎಂಬ ಅನುಮಾನಗಳು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆಯಂತೆ. ಆದ್ದರಿಂದ ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಲು ಜಾರ್ಜ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆಂದು ತಿಳಿದುಬಂದಿದೆ.


మరింత సమాచారం తెలుసుకోండి: