ಬೆಂಗಳೂರು: ಬಂದ್ ಮಾಡುವಾಗ ಸ್ವಯಂ ಪ್ರೇರಿತ ವಾಗಿರಬೇಕು. ಎಚ್ಚರದಿಂದಿರಬೇಕು,  ಯಾರಾದರೂ ಬಲವಂತದಿಂದ ಬಂದ್ ಮಾಡಲು ಯತ್ನಿಸಿದರೆ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಖಡಕ್ ಎಚ್ಚರಿಕೆಯನ್ನು ಸಿಎಂ ಬಿ ಎಸ್‌ ಯಡಿಯೂರಪ್ಪ ನೀಡಿದ್ದಾರೆ. ಹೌದು, ಜನವರಿ 8ರಂದು ಭಾರತ್ ಬಂದ್ ಗೆ ಕರೆ ನೀಡಿರುವ ಕುರಿತು ಈ ಹೇಳಿಕೆ ನೀಡಿದ್ದಾರೆ. 
 
ರಾಷ್ಟ್ರದಲ್ಲಿನ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ನೀಡಿರುವ ಮುಷ್ಕರದಿಂದ ರಾಜ್ಯದಲ್ಲಿ ಯಾವುದೇ ಪರಿಣಾಮ ಆಗುವುದಿಲ್ಲ ಎಂದ ಅವರು ಬಂದ್ ಮಾಡುವುದು ಜನವಿರೋಧಿ ಕೃತ್ಯ ಎಂದು ಕಿಡಿಕಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜನವರಿ 8 ಬುಧವಾರದಂದು ಮುಷ್ಕರಕ್ಕೆ ಕರೆ ನೀಡಿವೆ. ದೇಶಾದ್ಯಂತ ನಡೆಯಲಿರುವ ಮುಷ್ಕರಕ್ಕೆ ಹಲವು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ. ಆದರೆ ಕರ್ನಾಟದಲ್ಲಿ ಮುಷ್ಕರಿಂದ ಯಾವುದೇ ಪರಿಣಾಮ ಆಗುವುದಿಲ್ಲ ಎಂಬ ಭರವಸೆಯನ್ನು ಸಿಎಂ ಬಿ.ಎಸ್‌ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
 
“ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೇ ಸಾಮಾನ್ಯವಾಗಿರುತ್ತದೆ ಮತ್ತು ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ. ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಬಿಎಸ್‌ವೈ ಎಚ್ಚರಿಕೆಯನ್ನು ನೀಡಿದ್ದಾರೆ.
 
ಬಂದ್ ಯಾವಾಗಲೂ ಸ್ವಯಂ ಪ್ರೇರಿತವಾಗಿರಬೇಕು. ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಬಂದ್ ಗಳು ಜನವಿರೋಧಿಯೆಂದು ಈಗಾಗಲೇ ಸವೋಚ್ಛ ನ್ಯಾಯಾಲಯ ಹೇಳಿದೆ. ಈ ವಿಷಯ ಬಂದ್ ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು.ಜನರು ಯವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ” ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

మరింత సమాచారం తెలుసుకోండి: