ಕೊರೋನಾ ವೈರಸ್ ಇಂದ ಸುಧಾರಿಸಿಕೊಳ್ಳಲು ತವಕಿಸುತ್ತಿರುವ ಭಾರತಕ್ಕೆ ಈಗ ಮತ್ತೊಂದು ಗಂಡಾಂತರ  ಎದುರಾಗಿದೆ, ಭಾರತ ಮತ್ತು ಚೀನಾ ಗಡಿ ಭಾಗವಾದ ಲಡಾಕ್ ಗಾಲ್ವಾನ್ ಕಣಿವೆ ಭಾಗದಲ್ಲಿ ಚೀನಾ ಗುಂಡಿನ ಚಕಮಕಿ ನಡೆದಿದೆ ಈ ಚಕಮಕಿಯಲ್ಲಿ 20 ಜನ ಯೋಧರು ಹುತಾತ್ಮರಾಗಿದ್ದಾರೆ, ಈ ಕುರಿತು ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಚರ್ಚೆಯನ್ನು ನಡೆಸಿದ್ದಾರೆ.  ಈ ಚರ್ಚೆಯಲ್ಲಿ ಅಮೇರಿಕಾ ಭಾರತಕ್ಕೆ ನೀಡಿದ ಸಲಹೆಗಳೇನು ಗೊತ್ತಾ..?

 

ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟಿದ್ದು, ಲಡಾಕ್​ನ ಗಾಲ್ವನ್ ​ಕಣಿವೆ ಭಾಗದಲ್ಲಿ ಎರಡು ದೇಶಗಳ ಸೇನೆಯ ನಡುವೆ ಗುಂಡಿನ ಕಾಳಕ ನಡೆದಿದೆ. ಗುಂಡಿನ ಚಕಮಕಿ ವೇಳೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡಿರುವ ಬಗ್ಗೆ ಭಾರತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಟ್ರಂಪ್​ ಮಾತುಕತೆ ನಡೆಸಿದ್ದಾರೆ ಎಂದು ಅಮೆರಿಕ ತಿಳಿಸಿದೆ.

ಭಾರತ-ಚೀನಾ ಗಡಿ ಭಾಗದ ಪರಿಸ್ಥಿತಿಯನ್ನು ನಾವು ಅವಲೋಕಿಸುತ್ತಿದ್ದೇವೆ. ನಮ್ಮ 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತ ಘೋಷಿಸಿರುವುದನ್ನು ಗಮನಿಸಿದ್ದೇವೆ. ಮೃತರ ಕುಟುಂಬಕ್ಕೆ ನಾವು ಸಂತಾಪ ಸೂಚಿಸುತ್ತಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವಾಲಯದ ವಕ್ತಾರರು ಎಎನ್​ಐಗೆ ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಶಮನ ಮಾಡಲು ಚೀನಾ ಹಾಗೂ ಭಾರತ ಇಬ್ಬರೂ ಉತ್ಸುಕತೆ ತೋರಿವೆ. ಶಾಂತಿಯುತ ಮಾತುಕತೆಗೆ ನಮ್ಮ ಬೆಂಬಲ ಇದೆ. ಜೂನ್​ 2ರಂದು ನಡೆದ ಟ್ರಂಪ್​-ಮೋದಿ ಮಾತುಕತೆಯಲ್ಲಿ ಇಬ್ಬರೂ ಚೀನಾ ಗಡಿ ವಿವಾದದ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಅಮೆರಿಕ ಹೇಳಿದೆ.

ಲಡಾಖ್​ನ ಪ್ಯಾಂಗೋಂಗ್ ಟ್ಸೋ ಸರೋವರದ ಬಳಿ ಇರುವ ಎಲ್​ಎಸಿ ಗಡಿಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಚೀನಾ ಸೈನಿಕರು ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರೂ ಕೂಡ ಪ್ರತಿರೋಧ ತೋರುತ್ತಿದ್ದಾರೆ. ಸರೋವರದ ಬಳಿಯ ಗಡಿಭಾಗದ ಒಂದು ಆಯಕಟ್ಟಿನ ಜಾಗದಲ್ಲಿ ಭಾರತ ರಸ್ತೆ ನಿರ್ಮಿಸುತ್ತಿದೆ. ಹಾಗೆಯೇ, ಗಾಲ್ವನ್ ಕಣಿವೆಯಲ್ಲಿ ಡರ್ಬುಕ್-ಶಯೋಕ್-ದೌಲತ್ ಬೇಗ್ ಓಲ್ಡೀ ರಸ್ತೆಯನ್ನು ಸಂಪರ್ಕಿಸುವ ಮತ್ತೊಂದು ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಇದು ಚೀನೀಯರ ಕೆಂಗಣ್ಣಿಗೆ ಕಾರಣವಾಗಿದೆ. ಈ ರಸ್ತೆ ನಿರ್ಮಾಣ ಕಾರ್ಯಕ್ಕೆ ಚೀನೀಯರು ತೀವ್ರ ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ.

మరింత సమాచారం తెలుసుకోండి: