ಕೊರೋನಾ ವೈರಸ್ ಸೋಂಕು ಪ್ರತಿನಿತ್ಯ ಹೆಚ್ಚು ದಾಖಲಾಗುತ್ತಿದ್ದು ಈಗಾಗಲೇ ಆಸ್ಪತ್ರೆಗಳಲ್ಲಿ ಸಾಕಷ್ಟು ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದು ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಕೊರೋನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆಯನ್ನು ನೀಡುತ್ತಿತ್ತು ಆದರೆ ಖಾಸಗೀ ಆಸ್ಪತ್ರೆಗಳಲ್ಲಿ ಈ ಕೊರೋನಾ ಚಿಕಿತ್ಸೆಗೆ ಸಾಕಷ್ಟು ಹಣವನ್ನು ಪಡೆಯುತ್ತಿದ್ದರು ಇದನ್ನು ಗಮನಿಸಿದ ಸರ್ಕಾರ ಖಾಸಗೀ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಇಂತಿಷ್ಟೇ ದರವನ್ನು ಪಡೆಯಬೇಕು ಎಂದು ನಿಗದಿ ಪಡಿಸಿ ಒಂದು  ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಅಷ್ಟಕ್ಕೂ ಖಾಸಗೀ ಆಸ್ಪತ್ರೆಗಳಿಗೆ ಸರ್ಕಾರ ನೀಡಿದ ಮಾರ್ಗ ಸೂಚಿ ಏನು ಗೊತ್ತಾ…?

 

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೊಂಕಿತರ ಚಿಕಿತ್ಸೆಗೆ ಹೆಚ್ಚಿನ ದರ ನಿಗದಿಪಡಿಸುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನೂತನ ದರ ಜಾರಿಯಾಗಲಿದೆ.

 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ನೂತನ ಮಾರ್ಗಸೂಚಿಯಂತೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಒಂದೇ ಒಂದು ನಯಾ ಪೈಸೆ ಹೆಚ್ಚುವರಿ ಹಣ ಪಡೆಯುವಂತಿಲ್ಲ.ಒಂದು ವೇಳೆ ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ದರ ಪಡೆದರೆ ಅಂತಹ ಆಸ್ಪತ್ರೆಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವ ಅವಕಾಶ ನೂತನ ಮಾರ್ಗ ಸೂಚಿಯಲ್ಲಿದೆ.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ಸರ್ಕಾರ ಅಕೃತವಾಗಿ ಆದೇಶ ಹೊರಡಿಸಲಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ನೂತನ ಮಾರ್ಗ ಸೂಚಿಯಲ್ಲಿ ಬಿಬಿಎಂಪಿ, ಜಿಲ್ಲಾ ಆಸ್ಪತ್ರೆಗಳು ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದರೆ ಸರ್ಕಾರ ನಿಗದಿ ಮಾಡಿರುವ ದರವನ್ನೇ ಪಡೆಯಬೇಕು.

 

ಈ ಪ್ರಕಾರ ಗಂಟಲು ದ್ರವ ಪರೀಕ್ಷೆಗೆ 2600ರೂ., ಜನರಲ್ ವಾರ್ಡ್ ಚಿಕಿತ್ಸೆಗೆ 5200, ಆಕ್ಸಿಜನ್‍ಗೆ 7500ರೂ., ಐಸುಲೇಷನ್ ವಾರ್ಡ್ ಒಂದು ದಿನಕ್ಕೆ 8500ರೂ., ಐಸಿಯು/ವೆಂಟಿಲೇಟರ್‍ಗೆ 12 ಸಾವಿರ ರೂ. ದರ ನಿಗದಿ ಪಡಿಸಲಾಗಿದೆ.ನೂತನ ಮಾರ್ಗ ಸೂಚಿಯಲ್ಲಿ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೆ ಉಚಿತವಾಗಿ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು. ರೋಗಿಗೆ ತಗಲುವ ಚಿಕಿತ್ಸಾ ವೆಚ್ಚವನ್ನು ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಭರಿಸಲಿದೆ. ಮೂಲಗಳ ಪ್ರಕಾರ ಮುಂದಿನ ದಿನಗಳಲ್ಲಿ ಯಾರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಾರೋ ಅವರೆಲ್ಲರಿಗೂ ಸರ್ಕಾರವೇ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ ಎಂದು ತಿಳಿದು ಬಂದಿದೆ.

 

ಖಾಸಗಿ ಆಸ್ಪತ್ರೆಗಳು ಕೊರೊನಾ ಚಿಕಿತ್ಸೆಗೆ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದವು ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ದರಗಳನ್ನು ನಿಗದಿ ಪಡಿಸಿದೆ.ಮುಂದಿನ ಸಂಪುಟದಲ್ಲಿ ನಾವು ಚರ್ಚೆ ಮಾಡಿ ಇದನ್ನು ಅಕೃತವಾಗಿ ಜಾರಿ ಮಾಡಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

 

ಎಪಿಎಲ್, ಬಿಪಿಎಲ್ ಸೇರಿದಂತೆ ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ನೀಡುವ ಉದ್ದೇಶ ಇಟ್ಟುಕೊಂಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚೆ ಮಾಡಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.ಸಂತಸ: ಇನ್ನು ಸರ್ಕಾರ ನಿಗದಿ ಪಡಿಸಿರುವ ನೂತನ ದರಕ್ಕೆ ಭಾರತೀಯ ವೈದ್ಯಕೀಯ ಪರಿಷತ್ (ಐಎಂಎ) ಸಂತಸ ವ್ಯಕ್ತಪಡಿಸಿದೆ. ನಮಗೆ ಸರ್ಕಾರ ನಿಗದಿ ಪಡಿಸಿರುವ ದರ ತೃಪ್ತಿ ತಂದಿದೆ. ಈ ದರದಲ್ಲೇ ಎಲ್ಲರಿಗೂ ಚಿಕಿತ್ಸೆ ನೀಡುತ್ತೇವೆ. ಯಾವುದೇ ಕಾರಣಕ್ಕೂ ರೋಗಿಗಳಿಂದ ಹೆಚ್ಚುವರಿ ಹಣ ತೆಗೆದುಕೊಳ್ಳುವುದಿಲ್ಲ. ಇರುವ ದರದಲ್ಲೇ ಪ್ರತಿಯೊಬ್ಬರಿಗೂ ಉತ್ತಮವಾದ ಚಿಕಿತ್ಸೆ ನೀಡುತ್ತೇವೆ ಎಂದು ಐಎಂಎ ಪದಾಕಾರಿಗಳು ತಿಳಿಸಿದ್ದಾರೆ.

 

మరింత సమాచారం తెలుసుకోండి: