ಕೊರೋನಾ ವೈರಸ್ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿರುವ ಕಾರಣದಿಂದ ಬೆಂಗಳೂರಿನಲ್ಲಿ ಆರೋಗ್ಯ ತುರ್ತುಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಬೆಂಗಳೂರಿನ ಜನ ಆತಂಕದಲ್ಲಿ ಜೀವನವನ್ನು ನಡೆಸುವಂತಹ ಸನ್ನಿವೇಶ ನಿರ್ಮಾಣವಾಗಿದೆ ಇದರಿಂದಾಗಿ ಪ್ರತಿಪಕ್ಷಗಳು ಬೆಂಗಳೂರನ್ನು ಲಾಕ್ ಡೌನ್ ಮಾಡುವಂತೆ ಸಲಹೆಯನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ಹರಡುತ್ತಿರುವ ಮಹಾಮಾರಿ ಕೋವಿಡ್​ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ಸಿಎಂ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದ್ದು, ಜನಪ್ರತಿನಿಧಿಗಳು ಸರ್ಕಾರಕ್ಕೆ ಹಲವು ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಿನ ಸರ್ವಪಕ್ಷ ಮುಖಂಡರೊಂದಿಗೆ ಸಭೆ ನಡೆಸಿದ ಸಿಎಂ, ಕೋವಿಡ್ 19 ನಿಯಂತ್ರಣದ ಬಗ್ಗೆ ಗಂಭೀರ ಚರ್ಚೆ ನಡೆಸಿದರು. ಸಲಹೆ ಸೂಚನೆಯನ್ನೂ ಆಲಿಸಿದರು. ಅಷ್ಟಕ್ಕೂ ಈ ಸಭೆಯಲ್ಲಿ ಆದ ಚರ್ಚೆಗಳೇನು ಗೊತ್ತಾ..?

 

 

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರವಾರು ಯಾವ್ಯಾವ ಕ್ಷೇತ್ರದಲ್ಲಿ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಸಿಎಂ ಮಾಹಿತಿ ಪಡೆದರು.  ಬೆಂಗಳೂರಿನಲ್ಲಿ ಕೋವಿಡ್​ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳಲ್ಲಿ ಪ್ರಕರಣಗಳ ನಿರ್ವಹಣೆಗೆ ತಾತ್ಕಾಲಿಕ ಮತ್ತು ದೂರದೃಷ್ಟಿಯ ಕ್ರಮಗಳನ್ನು ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ನಿಮ್ಮ ಸಲಹೆಗಳನ್ನೂ ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

 

ಲಾಕ್​ಡೌನ್ ಬೇಕು ಎಂದು ವಿಪಕ್ಷದ ಜನಪ್ರತಿನಿಧಿಗಳು ಆಗ್ರಸಿದರೂ ಇದಕ್ಕೆ ಸಿಎಂ ಮತ್ತು ಅವರ ಸಚಿವರು ಒಪ್ಪಲಿಲ್ಲ. ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ವೆಚ್ಚ ದುಬಾರಿ ಆಗ್ತಿದೆ, ಹಣ ಕಟ್ಟಲಾಗದೆ ಹೆಣ ತರಲೂ ಆಗುತ್ತಿಲ್ಲ ಎಂದು ಕಾಂಗ್ರೆಸ್​ ಶಾಸಕರೊಬ್ಬರು, ಮೂರ್ನಾಲ್ಕು ದಿನಗಳ ಹಿಂದೆ ಓರ್ವ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಹಣ ಕಟ್ಟಲಾಗದೆ ಅನುಭವಿಸಿದ ಪರಿಸ್ಥಿತಿಯನ್ನು ಪ್ರಸ್ತಾಪಿಸಿದರು.

 

ರವಿಶಂಕರ್ ಗೂರೂಜಿ ಆಶ್ರಮದಲ್ಲಿ ಕೋವಿಡ್​ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು, ಕೋವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ವಿಚಾರದಲ್ಲಿ ಯಾವುದೇ ಜಾತಿಯ ಭೇದಭಾವ ಬೇಡ, ಮಾರ್ಕೆಟ್ ಏರಿಯಾಗಳಲ್ಲಿ ಸೋಂಕು ನಿಯಂತ್ರಿಸಲು ಸರ್ಕಾರ ಹೆಚ್ಚು ನಿಗಾವಹಿಸಬೇಕು, ಬೆಂಗಳೂರಿನ ಸ್ಲಂಗಳಿಗೆ ಸೋಂಕು ಹರಡದಂತೆ ಜಾಗ್ರತೆ ವಹಿಸಬೇಕು, ಆಶಾ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಿಸಬೇಕು, ಬೆಡ್​ಗಳ ಮಾಹಿತಿ ಪಡೆಯಲು ವೆಬ್​ಸೈಟ್ ಓಪನ್ ಮಾಡಬೇಕು, ಬೆಂಗಳೂರನ್ನು ಸಂಪೂರ್ಣವಾಗಿ ಸ್ಯಾನಿಟೈಜರ್​ ಮಾಡಬೇಕು… ಎಂಬ ಸಲಹೆ ವಿಪಕ್ಷದ ಜನಪ್ರತಿನಿಧಿಗಳಿಂದ ಕೇಳಿಬಂತು.

 

 

ಲಾಕ್​ಡೌನ್​ ಇಲ್ಲ. ಸೀಲ್​ಡೌನ್ ಅನ್ನು ಸ್ಟ್ರಿಕ್ಟ್ ಆಗಿ ಮಾಡುವುದಾಗಿ ಆಡಳಿತ ಪಕ್ಷ ಹೇಳಿತು. ಸಭೆ ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, ಕರೊನಾ ರೋಗಿಗಳಿಗೆ ಊಟದ ವ್ಯವಸ್ಥೆ ಸರಿಯಿಲ್ಲ ಎಂದು ಸಭೆಯಲ್ಲಿ ಕಾಂಗ್ರೆಸ್​ನವರು ಆರೋಪ ಮಾಡಿದ್ರು. ರೋಗಿಗಳಿಗೆ ಉತ್ತಮ ಆಹಾರವನ್ನೇ ನೀಡಲಾಗುತ್ತಿದೆ. ಈ ಬಗ್ಗೆ ಸಿಎಂ ಈಗಾಗಲೇ ಖಡಕ್ ಸೂಚನೆ ನೀಡಿದ್ದಾರೆ ಎಂದು ಶ್ರೀರಾಮುಲು ಸಮರ್ಥಿಸಿಕೊಂಡರು.

ಸರ್ವ ಪಕ್ಷ ಸಭೆಯಲ್ಲಿ ಶ್ರೀರಾಮುಲು, ಆರ್.ಅಶೋಕ್, ಬೈರತಿ ಬಸವರಾಜ್, ಬಸವರಾಜ ಬೊಮ್ಮಾಯಿ, ಸುರೇಶ್ ಕುಮಾರ್, ತೇಜಸ್ವಿ ಸೂರ್ಯ, ಎಂ.ಕೃಷ್ಣಪ್ಪ, ಹ್ಯಾರಿಸ್, ಉದಯ್ ಗರುಡಾಚಾರ್, ರಘು, ವಿಶ್ವನಾಥ್, ಜೆಡಿಎಸ್ ಎಂಎಲ್​ಸಿ ಶರವಣ, ರಮೇಶ್ ಗೌಡ, ಕಾಂಗ್ರೆಸ್​ನ ಜಮೀರ್ ಅಹ್ಮದ್, ನಾಸೀರ್ ಹುಸೇನ್, ಸಂಸದ ಡಿ.ಕೆ ಸುರೇಶ್, ಎನ್.ಎ. ಹ್ಯಾರಿಸ್, ದಿನೇಶ್​ ಗುಂಡೂರಾವ್, ರಿಜ್ವಾನ್ ಹರ್ಷದ್ ಪಾಲ್ಗೊಂಡಿದ್ದರು.

 

మరింత సమాచారం తెలుసుకోండి: