ಎಚ್. ವಿಶ್ವನಾಥ್ ಅವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಅನೇಕ ದಿನಗಳೇ ಕಳೆದಿವೆ. ಆದರೆ ಇದೀಗ ಯಾರು ಮುಂದಿನ ಜೆಡಿಎಸ್ ರಾಜ್ಯಾಧ್ಯಕ್ಷ ಆಗಲಿದ್ದಾರೆ ಅನ್ನೋದರ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಈ ಸಂದದರ್ಭದಲ್ಲಿ ಮಧು ಬಂಗಾರಪ್ಪ ಅವರ ಹೆಸರನ್ನು ಎಚ್.ವಿಶ್ವನಾಥ್ ಸೂಚಿಸಿದ್ದಾರೆ.


ಹೌದು, ದೇವೇಗೌಡ ಅವರು ಮನವಿ ಮಾನಿಕೊಂಡರೂ ಸಹ ಎಚ್.ವಿಶ್ವನಾಥ್ ಅವರು ಮತ್ತೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿಲ್ಲ. ಹೀಗಾಗಿ ಇದೀಗ ಮಧು ಬಂಗಾರಪ್ಪ ಅವರ ಹೆಸರನ್ನು ಅವರು ಉಲ್ಲೇಖ ಮಾಡಿದ್ದಾರೆ. ಮಧು ಬಂಗಾರಪ್ಪ ಪಕ್ಷವನ್ನು ಮತ್ತೆ ಕಟ್ಟಲಿದ್ದಾರೆ ಎನ್ನುವ ಭರವಸೆ ನೀಡಿದ್ದಾರೆ.

ಅಲ್ಲದೇ ಸಿಎಂ ಅವರ ಗ್ರಾಮ ವಾಸ್ತವ್ಯ ಕುರಿತು ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಜಖಂಗೊಂಡ ಆಡಳಿತ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಜನರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಿಎಂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಇದನ್ನು ಎಲ್ಲರೂ ಮೆಚ್ಚುವಂಥದ್ದೇ ಎಂದಿದ್ದಾರೆ.

ಇನ್ನು ಮುಖ್ಯಮಂತ್ರಿಗಳಂತೆ ಜಿಲ್ಲಾಧಿಕಾರಿಗಳು ಸಹ ಗ್ರಾಮ ವಾಸ್ತವ್ಯವನ್ನು ಮಾಡುವಂತಾಗಲಿ. ಅವರೂ ಸಹ ಗ್ರಾಮಗಳ ಪರಿಸ್ಥಿತಿ ಅರಿಯಲಿ ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ. 



మరింత సమాచారం తెలుసుకోండి: