ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡುವುದು ಒಳಿತು ಎಂದು ಸಲಹೆ ನೀಡಿದ್ದ ಸಿ,ಟಿ.ರವಿ ಅವರ ವಿರುದ್ಧ ದೇವೇಗೌಡರು ಪ್ರಶ್ನೆ ಮಾಡಿದ್ದಾರೆ. ಸಿಟಿ ರವಿ ಅವರು ಸೂಪರ್ ಸ್ಪೆಷಾಲಿಟಿ ವೈದ್ಯರೇ ಎಂದು ಪ್ರಶ್ನಿಸಿದ್ದಾರೆ. 


ಸಿಎಂ ಕುಮಾರಸ್ವಾಮಿ ಅವರು, ಕರೇಗುಡ್ಡಕ್ಕೆ ವಾಸ್ತವ್ಯ ಹೋಗುವಾಗ ಅವರನ್ನು ವೈಟಿಪಿಎಸ್ ಕಾರ್ಮಿಕರ ಸಂಘದ ಸದಸ್ಯರು ತಡೆದಿದ್ದರು. ಇದಕ್ಕೆ ಆಕ್ರೋಶ ವಯಕ್ತಪಪಡಿಸಿದ ಕುಮಾರಸ್ವಾಮಿ, ನರೇಂದ್ರ ಮೋದಿಗೆ ಓಟ್ ಹಾಕ್ತಿರಿ. ಆದರೆ ಸಮಸ್ಯೆ ನಾನು ಬಗೆಹರಿಸಬೇಕಾ ಎಂದು ಪ್ರಶ್ನಿಸಿದ್ದರು.


ಹೀಗಾಗಿ ಸಿಎಂ ಅವರ ಹೇಳಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಖಂಡಿಸಿದರುಉ. ಸಿಟಿ ರವಿ ಅವರು, ಸಿಎಂ  ಕುಮಾರಸ್ವಾಮಿ ಅವರು ರಾಜ್ಯ ಮತ್ತು ಅವರ ಆರೋಗ್ಯದ ಹಿತದೃಷ್ಟಿಯಿಂದ ರಾಜೀನಾಮೆ ನಿಡುವುದು ಒಳ್ಳೆಯದು ಎನ್ನುವ ಸಲಹೆ ನೀಡಿದರು. ಆದರೆ, ದೇವೇಗೌಡರು, ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಸಿಎಂ ಅವರ ಆರೋಗ್ಯವನ್ನು ಸಿಟಿ ರವಿ ರಿಪೇರಿ ಮಾಡ್ತಾರೆಯೇ? ಎಂದು ಪ್ರಶ್ನಿಸಿದರು.  


మరింత సమాచారం తెలుసుకోండి: