ರಾಜ್ಯ ರಾಜಕಾರಣದಲ್ಲಿ ಅಲ್ಲೋಕ ಕಲ್ಲೋಕವೇ ನಡೆದು ಹೋಗಿದೆ. ಈಗಾಗಲೇ ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರದ ಬಲ ಕುಗ್ಗಿದಂತಾಗಿದೆ. ಸಿಎಂ ಕುಮಾರಸ್ವಾಮಿ ಅವರು ವಿದೇಶ ಪ್ರವಾಸದಲ್ಲಿದ್ದಾಗಲೇ ಈ ಎಲ್ಲ ಬೆಳವಣಿಗೆಗಳು ನಡೆದು ಹೋಗಿವೆ. 
 
ಇನ್ನಷ್ಟು ಶಾಸಕರು ರಾಜೀನಾಮೆ ನೀಡಿದ್ದೇ ಆದಲ್ಲಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಪತನಗೊಳ್ಳುವುದು ನಿಶ್ಚಿತ ಎನ್ನಲಾಗಿದೆ. ಜೊತೆಗೆ ರಾಜ್ಯಪಾಲರನ್ನು ಭೇಟಿಯಾದ ರಾಜೀನಾಮೆ ನೀಡಿದ ಶಾಸಕರು, ಯಾವ ಕಾರಣಕ್ಕಾಗಿ ರಾಜೀನಾಮೆ ನೀಡುತ್ತಿದ್ದೇವೆ ಎನ್ನುವ ಮಾಹಿತಿಯನ್ನೂ ನೀಡಿದ್ದಾರೆ. ಇದರ ನೇತೃತ್ವ ವಹಿಸಿದ್ದು ಎಚ್.ವಿಶ್ವನಾಥ್. 


ಈಗಾಗಲೇ ೧೪ ಜನ ಶಾಸಕರು ರಾಜೀನಾಮೆ ನೀಡಿದ್ದಾರೆ. ಇನ್ನು ಎಂಟು ಜನ ರಾಜೀನಾಮೆ ನೀಡಿದರೆ ಒಟ್ಟು ರಾಜೀನಾಮೆ ನೀಡುವ ಶಾಸಕರ ಸಂಖ್ಯೆ 22 ಆಗುತ್ತದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಹೀಗಾಗಿ ಮೈತ್ರಿ ಸರ್ಕಾರ ಪತನವಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. 


మరింత సమాచారం తెలుసుకోండి: