ಮೈಸೂರು : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಂದ ಇದೀಗ ಸ್ಪೋಟಕ ಮಾಹಿತಿಯೊಂದು ಹೊರ ಬಿದ್ದಿದೆ. ಅದೇನೆಂದರೆ ಬಾಂಗ್ಲಾ ಮೂಲದ ಉಗ್ರರು ಎಲ್ಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಬಾಂಗ್ಲಾ ಮೂಲದ ಉಗ್ರಗಾಮಿ ಸದಸ್ಯರು ನುಸುಳಿರುವ ಬಗ್ಗೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಮುಜಾಯಿದ್ದೀನ್ ಸಂಘಟನೆಯ ಉಗ್ರರನ್ನು ಸದೆಬಡಿಯಲು ಖಾಕಿ ಪಡೆ ಕಾರ್ಯೋನ್ಮುಖವಾಗಿದೆ ಎಂದರು. ಮೈಸೂರಿನಲ್ಲಿ  ಮಾತನಾಡಿದ ಅವರು, ಈಗಾಗಲೇ ಜಮ್ಮು ಕಾಶ್ಮೀರ ಹಾಗೂ ಬಾಂಗ್ಲಾದೇಶದ ಗಡಿ ಮೂಲಕ ಉಗ್ರರು ನಮ್ಮ ದೇಶವನ್ನು ಪ್ರವೇಶಿಸಿದ್ದಾರೆ. ಈ ಉಗ್ರರು ಹೆಚ್ಚಾಗಿ ನಮ್ಮ ರಾಜ್ಯಕ್ಕೆ ಪ್ರವೇಶ ಮಾಡಿದ್ದಾರೆಂದು ಕೇಂದ್ರ ಗೃಹ ಇಲಾಖೆ ಈಗಾಗಲೇ ಮಾಹಿತಿ ನೀಡಿದೆ. 


ನಮ್ಮ ರಾಜ್ಯದ ಕರಾವಳಿ ಪ್ರದೇಶದಲ್ಲಿ ಉಗ್ರರು ಸಕ್ರಿಯರಾಗಿದ್ದಾರೆ. ಈಗಾಗಲೇ ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದ್ದು, ಅತ್ಯಂತ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಕೆಲವೊಮ್ಮೆ ಹರಡುವ ವದಂತಿಗಳಿಗೆ ರಾಜ್ಯದ ಜನತೆ ಕಿವಿಗೊಡುವ ಅಗತ್ಯವಿಲ್ಲ ಈಗಾಗಲೇ ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಮುಜಾಯಿದ್ದೀನ್ ಪಡೆಯ ಉಗ್ರರನ್ನು ಸದೆಬಡಿಯಲು ನಮ್ಮ ಖಾಕಿ ಪಡೆ ಸಜ್ಜಾಗಿದ್ದಾರೆ ಎಂದು ಹೇಳಿದರು.   ಈಗಾಗಲೇ ರಾಜಧಾನಿಯಲ್ಲಿ 20ಕ್ಕೂ ಹೆಚ್ಚು ಸ್ಥಳದಲ್ಲಿ ಉಗ್ರರ ಅಡಗುತಾಣ ಪತ್ತೆಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಕೆಲವೊಂದು ಮಾಹಿತಿಗಳನ್ನು ತಿಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಿಡಿಸಿದರು.

ಇದರ ಜೊತೆಗೆ ಮುಂದಿನ ವರ್ಷದೊಳಗೆ 16ಸಾವಿರ ಪೊಲೀಸ್ ಮತ್ತು 1ಸಾವಿರ ಸಬ್ ಇನ್ಸ್ ಪೆಕ್ಟರ್ ಹುದ್ದೆ ಭರ್ತಿಯಾಗಲಿದೆ. ಈ ವರ್ಷ 6 ಸಾವಿರ ಹುದ್ದ ಭರ್ತಿ ಮಾಡಲಾಗಲು ಮುಂದಾಗಿದ್ದೇವೆ. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ತರಲಿದ್ದೇವೆ, ತಂತ್ರಜ್ಞಾನ ಹೆಚ್ಚಾಗುತ್ತಿದ್ದಂತೆ ಸೈಬರ್ ಕ್ರೈಂ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳನ್ನು ಭೇದಿಸುವುದು ಸವಾಲಿನ ಕೆಲಸವಾಗಿದೆ. ಪೊಲೀಸರು ಪ್ರಾಮಾಣಿಕವಾಗಿರಬೇಕು ಕರ್ತವ್ಯ ನಿಷ್ಠೆ ಮರೆಯಬಾರದು ಸತ್ಯವೇ ತಂದೆ , ನ್ಯಾಯವೇ ತಾಯಿ ಇದ್ದಂತೆ ,ಸತ್ಯ ನ್ಯಾಯ ಎತ್ತಿ ಹಿಡಿಯುವ ಕೆಲಸವನ್ನು ಪೊಲೀಸರು ಮಾಡಬೇಕೆಂದು ತಿಳಿಸಿದ್ದಾರೆ. 


మరింత సమాచారం తెలుసుకోండి: