ಕ್ರಿಕೆಟ್ ಇತಿಹಾಸದ ಲೆಜೆಂಡ್, ನೂರು ಶತಕಗಳ ಸರದಾರ, ಕ್ರಿಕೆಟ್ ನ ದೇವರೆಂದೇ ಖ್ಯಾತಿ ಪಡೆದಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡುಲ್ಕರ್ ಗುರುಪ್ರಸಾದ್ ಗಾಗಿ ಕಾಯುತ್ತಿದ್ದಾರೆ. ಅದು ಕೂಡ ಕಾತುರದಿಂದ. ಹೌದು, ಏನು ಯಾಕೆ ಎಂಬ ಇಂಟರೆಸ್ಟಿಂಗ್ ಸ್ಟೋರಿಯ ಫುಲ್ ಡೀಟೆಲ್ಸ್ ಇಲ್ಲಿದೆ ನೋಡಿ. 
 
 ತೆಂಡುಲ್ಕರ್‌ 19 ವರ್ಷದ ಹಿಂದೆ ಕೆಲವು ನಿಮಿಷಗಳ ಮಟ್ಟಿಗೆ ಭೇಟಿಯಾಗಿದ್ದ, ಗುರುಪ್ರಸಾದ್‌ ಎಂಬ ಅಭಿಮಾನಿಯನ್ನು ತಾವಾಗಿಯೇ ನೆನಪಿಸಿಕೊಂಡಿದ್ದಾರೆ. ಅಷ್ಟು ಮಾತ್ರವಲ್ಲ ಅವರನ್ನು ಭೇಟಿಯಾಗುವ ಹಂಬಲ ವ್ಯಕ್ತಪಡಿಸಿದ್ದಾರೆ. ಅದಾದ ನಂತರ ಅದುವರೆಗೆ ಅನಾಮಿಕರಾಗಿದ್ದ ಆ ಅಭಿಮಾನಿ, ರಾತ್ರೋರಾತ್ರಿ ಜನಪ್ರಿಯರಾಗಿದ್ದಾರೆ. ಅವರ ಮನೆಮುಂದೆ ಟೀವಿವಾಹಿನಿಗಳು ಸಾಲುಗಟ್ಟಿವೆ. ಈ ವೇಳೆ ರೋಚಕ ಕಥೆಯೊಂದು ತೆರೆದುಕೊಂಡಿದೆ. 
 
ಡಿ.14ನೇ ತಾರೀಖು ಸಚಿನ್‌ ತೆಂಡುಲ್ಕರ್‌ ಮಾಡಿರುವ ಟ್ವೀಟ್‌ ಹೀಗಿದೆ: “ಅದೊಂದು ಭೇಟಿ ಬಹಳ ಸ್ಮರಣೀಯ.ಟೆಸ್ಟ್‌ ಸರಣಿಯೊಂದರ ವೇಳೆ ಚೆನ್ನೈನ ತಾಜ್‌ ಕೊರೊಮಂಡೆಲ್‌ ಹೋಟೆಲ್‌ ಸಿಬ್ಬಂದಿ ಜೊತೆಗೆ ಚರ್ಚೆ ನಡೆಸಿದ್ದೆ. ನನ್ನ ಮೊಳಕೈ ಗಾರ್ಡ್‌ ಬಗ್ಗೆ ಆಗ ನಡೆಸಿದ ಚರ್ಚೆ ಪರಿಣಾಮ,ನಾನು ಗಾರ್ಡ್‌ ವಿನ್ಯಾಸವನ್ನೇ ಬದಲಿಸಿದ್ದೆ.  ಆ ವ್ಯಕ್ತಿ ಎಲ್ಲಿದ್ದಾನೆಂಬ ಕುತೂಹಲ ನನ್ನದು. ಅವರನ್ನು ಭೇಟಿಯಾಗುವ ಉತ್ಸಾಹದಲ್ಲಿದ್ದೇನೆ. ನೆಟಿಜನ್‌ಗಳೇ ಅವರನ್ನು ಹುಡುಕಲು ಸಹಾಯ ಮಾಡುತ್ತೀರಾ?’ ಈ ಮೇಲಿನ ಟ್ವೀಟನ್ನು ನೋಡಿ ಸಾವಿರಾರು ಮಂದಿ ಕುತೂಹಲಪಟ್ಟಿದ್ದಾರೆ. ಅಂತಹ ವ್ಯಕ್ತಿ ಯಾರೆಂದು ಹುಡುಕಲು ಆರಂಭಿಸಿದ್ದಾರೆ. ಆಗಗುರುಪ್ರಸಾದ್‌ ಅವರ ಸೋದರಳಿಯ ಎನ್‌.ಶ್ಯಾಮಸುಂದರ್‌ ಎನ್ನುವವರು ಒಂದು ಟ್ವೀಟ್‌ ಮಾಡಿ, ಸಚಿನ್‌ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
 
ಅದುಹೀಗಿದೆ: “ನೀವು ಹುಡುಕುತ್ತಿರುವ ಆ ವ್ಯಕ್ತಿ ನನ್ನ ಅಂಕಲ್‌. ಆ ವ್ಯಕ್ತಿಯನ್ನು ನೀವು 2ನೇ ಮಹಡಿಯಲ್ಲಿ ಭೇಟಿ ಮಾಡಿದ್ದಿರಿ. ಆಗ ನೀವು ನೆಲಮಹಡಿಗೆ ಹೊರಟಿದ್ದಿರಿ. ಅವರೇ ನಿಮ್ಮ ಮೊಳಕೈ ಗಾರ್ಡ್‌ ಬದಲಿಸಲು ಸಲಹೆ ನೀಡಿದ್ದು. ನೀವು ಅವರಿಗೆ ಹಸ್ತಾಕ್ಷರ ನೀಡಿದ ಹಾಳೆಯನ್ನೂ ಇಲ್ಲಿ ಲಗತ್ತಿಸಿದ್ದೇನೆ’.ಎಂದು ಪ್ರತ್ಯತ್ತರಿಸಿದ್ದಾರೆ. ಮುಂದೆ ಕೆಲವೇ ದಿನಗಳಲ್ಲಿ ತಮ್ಮ ಮೊಳಕೈ ಗಾರ್ಡ್‌ ವಿನ್ಯಾಸ ಬದಲಿಸಿಕೊಂಡಿದ್ದರು. ಈಗ ತೆಂಡುಲ್ಕರ್‌ ತನ್ನನ್ನು ಭೇಟಿ ಮಾಡಿದರೆ, ತನ್ನ ಜೀವನದಲ್ಲಿ ಅದಕ್ಕಿಂತ ಮಹತ್ವದ ಕ್ಷಣ ಇನ್ನೊಂದು ಇರಲಿಕ್ಕಿಲ್ಲ ಎಂದು ಗುರುಪ್ರಸಾದ್‌ ಹೇಳಿಕೊಂಡಿದ್ದಾರೆ

మరింత సమాచారం తెలుసుకోండి: